
kallianpurdotcom: Mob 9741001849
ಕಲ್ಯಾಣಪುರ: ಇಲ್ಲಿನ ಡಾ .ಟಿ. ಎಂ. ಎ. ಪೈ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ವಿವಿಧ ಸಂಘಗಳ ಹಾಗೂ ಯಕ್ಷಗಾನ ತರಗತಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಅಮ್ಮುಂಜೆ ಭ್ರಾಮರಿ ನಾಟ್ಯಾಲಯ ಸಂಸ್ಥೆಯ ಭರತನಾಟ್ಯ ಗುರುಗಳು ಹಾಗೂ ಕನ್ನಡ ಸಿರಿ ಪ್ರಶಸ್ತಿ ಪುರುಸ್ಕೃತರು ಶ್ರೀಯುತ ಭವಾನಿ ಶಂಕರ್ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಲೆಯಿಂದ ಸಂಸ್ಕಾರ ಸಿಗುತ್ತದೆ. ಕಲೆ ಅನ್ನುವಂತದ್ದು ನಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿರುವಂತಹ ಶಾಲೆಯ ಯಕ್ಷಗಾನ ಗುರುಗಳಾಗಿರುವ ಬಡಾನಿಡಿಯೂರು ಶ್ರೀಯುತ ಕೇಶವ ರಾವ್ರವರು ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಹಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು, ಅವಕಾಶಗಳು ಸಿಕ್ಕಾಗ ಅದನ್ನು ಪ್ರೀತಿ ಪೂರ್ವಕವಾಗಿ ಸ್ವೀಕರಿಸಬೇಕೆಂದು ತಿಳಿಸಿ, ಶುಭಹಾರೈಸಿದರು.
ಶಾಲಾ ಮುಖ್ಯಶಿಕ್ಷಕರಾಗಿರುವ ಶ್ರೀ ಎಚ್.ಎನ್.ವೆಂಕಟೇಶ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳು ಕಲಿಯುವುದರ ಜೊತೆಗೆ ಸೂಕ್ತವಾಧ ಕಲೆಯನ್ನು ಆಯ್ಕೆ ಮಾಡಿಕೊಂಡು, ಆ ಕಲೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಎಂದು ತಿಳಿಸಿದರು. ಶಿಕ್ಷಕಿ ಶ್ರೀಮತಿ ಸುರೇಖಾ ಸ್ವಾಗತಿಸಿದರು. ಅಧ್ಯಾಪಕರಾಗಿರುವ ಶ್ರೀ ಬಾಲಕೃಷ್ಣ ನಾಯಕ್ ವಂದಿಸಿದರು. ಶಿಕ್ಷಕಿ ಶ್ರೀಮತಿ ದಿವ್ಯಲಕ್ಷ್ಮೀ ಕಾರ್ಯಕ್ರಮ ಸಂಯೋಜಿಸಿದರು. ವೇದಿಕೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕ, ಕ್ಲಬ್ನ ಅಧ್ಯಕ್ಷರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.