Skip to main content

ಗುಜರಾತ್ ಬಿಲ್ಲವರ ಸಂಘದ ಮಂದಿರದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿಸಲ್ಪಟ್ಟ ಸಾಮೂಹಿಕ ಶ್ರೀ ಸತ್ಯನಾರಾಯಣ ಕಥಾಪೂಜೆ-ಶ್ರೀ ನಾರಾಯಣ ಗುರುವಿಗೆ ಅಭಿಷೇಕ.

By January 8, 2026Mumbai News
kallianpurdotcom: Mob 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ (ಆರ್‌ಬಿಐ), ಜ.೦೭: ಗುಜರಾತ್ ಬಿಲ್ಲವರ ಸಂಘವು ಕಳೆದ ಭಾನುವಾರ ಗುಜರಾತ್ ರಾಜ್ಯದ ಬರೋಡಾ ಅಲ್ಕಾಪುರಾ ಇಲ್ಲಿನ ಸಂಘದ ಶ್ರೀ ಬೈದ್ಯಶ್ರೀ ಸಾಂಸ್ಕೃತಿಕ ಸಭಾ ಭವನದಲ್ಲಿ  ಸಂಘದ ಗೌರವಾಧ್ಯಕ್ಷ ದಯಾನಂದ ಬೊಂಟ್ರ (ಬೆಳ್ಮಣ್ಣು) ಬರೋಡಾ ಅವರ ಮಾರ್ಗದರ್ಶನದೊಂದಿಗೆ ಜಿಬಿಎಸ್ ಅಧ್ಯಕ್ಷ ಹರೀಶ್ ವಿ.ಪೂಜಾರಿ ಮಡ್ಯಾರ್ (ದೇರಳಕಟ್ಟೆ) ಸಾರಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಅಭಿಷೇಕ, ಸಾಮೂಹಿಕ ಶ್ರೀ ಸತ್ಯನಾರಾಯಣ ಕಥಾಪೂಜೆ,  ನೆರವೇರಿಸಿತು. ಜರುಗಿಸಲ್ಪಟ್ಟಿದ್ದು, ದಯಾನಂದ ಬೊಂಟ್ರ ದೀಪಹಚ್ಚಿ ಧಾರ್ಮಿಕ ಪೂಜಾಧಿಗಳಿಗೆ ಚಾಲನೆಯನ್ನಿತ್ತು ಶುಭಶಂಸನೆಗೈದರು.

ಅಲ್ಕಾಪುರಾ ಅಲ್ಲಿನ ಸಂಘದ ಮಂದಿರದಲ್ಲಿನ ಬ್ರಹ್ಮಶ್ರೀ ನಾರಾಯಣ ಗುರುವಿಗೆ ಪ್ರಾಣ ಪ್ರತಿಷ್ಠಾಪಣೆಯ ಬಳಿಕ ಮೊದಲ ಬಾರಿ ಪುರೋಹಿತ ಶ್ರೀ ಧನಂಜಯ ಶಾಂತಿ ತಮ್ಮ ವೈಧಿಕತ್ವದಲ್ಲಿ ಬೆಳಿಗ್ಗೆ ಅಭಿಷೇಕ  ನೆರವೇರಿಸಿದರು. ಬಳಿಕ ಶ್ರೀ ಸತ್ಯನಾರಾಯಣ ಕಥಾ ಪೂಜೆ ನಡೆಸಿ ಮಧ್ಯಾಹ್ನ ಮಹಾ ಮಂಗಳಾರತಿಗೈದು ನೆರೆದ ಸದ್ಭಕ್ತರನ್ನು ಹರಸಿದರು. ಹರೀಶ್ ವಿ.ಪೂಜಾರಿ ಮತ್ತು ಶೋಭಾ ಹೆಚ್.ಪೂಜಾರಿ ದಂಪತಿ ಪೂಜಾಧಿಗಳ ಯಜಮಾನತ್ವ ವಹಿಸಿದ್ದು, ಗುಜರಾತ್ ಬಿಲ್ಲವರ ಸಂಘದ ಮಾಜಿ ಅಧ್ಯಕ್ಷ ಮನೋಜ್ ಸಿ.ಪೂಜಾರಿ (ಸೂರತ್) ಪರಿವಾರದ ಸೇವಾರ್ಥವಾಗಿ ಅನ್ನಸಂತರ್ಪಣೆ ಸಂಪನ್ನಗೊಂಡಿತು.

ಕಾರ್ಯಕ್ರಮದಲ್ಲಿ ತುಳು ಸಂಘ ಬರೋಡ ಇದರ ಪ್ರಮಿಳಾ ಶಶಿಧರ ಶೆಟ್ಟಿ, ವಿಶಾಲ್ ಶೆಟ್ಟಿ, ದಿನೇಶ್ ಶೆಟ್ಟಿ, ಜಿಬಿಎಸ್ ಮಾಜಿ ಅಧ್ಯಕ್ಷ ಮನೋಜ್ ಸಿ.ಪೂಜಾರಿ, ನಿಕಟಪೂರ್ವ ಅಧ್ಯಕ್ಷ ವಿಶ್ವನಾಥ್ ಜಿ.ಪೂಜಾರಿ ಬಾರ್ಡೋಲಿ (ಸೂರತ್), ಮುಖ್ಯ ಸಂಯೋಜಕ ವಾಸು ವಿ.ಸುವರ್ಣ, ಉಪಾಧ್ಯಕ್ಷೆ ಸರಿತಾ ಪೂಜಾರಿ, ಕಾರ್ಯದರ್ಶಿ ಸಂತೋಷ್ ಸಾಲಿಯನ್, ಖಜಾಂಚಿ ಸುದೇಶ್ ಕೋಟಿಯನ್, ಜೊತೆ ಕಾರ್ಯದರ್ಶಿ ಸೌಮ್ಯ ಪೂಜಾರಿ, ಜ್ಯೋತಿ ಕೋಟ್ಯಾನ್, ವಸಂತ್ ಕುಂದರ್ ಆಹ್ಮದಾಬಾದ್ ಮತ್ತಿತರರು ಪ್ರಧಾನವಾಗಿ ಉಪಸ್ಥಿತರಿದ್ದರು.

ಗಣ್ಯರು ಸಂಘದ ಮಂದಿರದಲ್ಲಿನ ಮಾತೆ ಗಾಯತ್ರಿದೇವಿ, ಕೋಟಿ-ಚೆನ್ನಯ, ನಾರಾಯಣ ಗುರುಗಳ ಪ್ರತಿಮೆಗಳಿಗೆ ಆರತಿಗೈದ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು. ಜಿಬಿಎಸ್ ಕಾರ್ಯಕಾರಿ ಸಮಿತಿ ಸದಸ್ಯರು, ಸದಸ್ಯರನೇಕರು ಸೇರಿದಂತೆ ಗುಜರಾತ್‌ನದ್ಯಾಂತದಿಂದ ಆಗಮಿಸಿದ್ದ ಬಿಲ್ಲವ ಬಂಧುಗಳು, ಮಹಿಳೆಯರು, ಮಕ್ಕಳು ಶ್ರದ್ಧಾಪೂರ್ವಕವಾಗಿ ಪೂಜಾಧಿಗಳಲ್ಲಿ ಪಾಲ್ಗೊಂಡು ನಾರಾಯಣ ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.