Skip to main content

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ವಿದ್ಯಾಥಿಗಳಿಗೆ ಪುಸ್ತಕಗಳ ವಿತರಣೆ ಶಿಕ್ಷಣದ ಮಹತ್ವ ಅರಿತು ಬದುಕು ರೂಪಿಸಿರಿ : ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ.

By June 14, 2026Kannada News
kallianpurdotcom: Mob 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ, ಜೂ.೧೩: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜ್‌ನ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾಥಿಗಳಿಗೆ ದವಳತ್ರಯ ಜೈನಕಾಶಿ ಟ್ರಸ್ಟ್ ಹಾಗೂ ಮೂಡಬಿದ್ರಿ ಜೈನ ಮಠ ಟ್ರಸ್ಟ್ ಸಹಯೋಗದಲ್ಲಿ ಹುಬ್ಬಳ್ಳಿ ಇಂದ್ರ ಕುಮಾರ್ ಸಹಕಾರದಲ್ಲಿ ಉಚಿತವಾಗಿ ನೀಡಿದ ಪುಸ್ತಕಗಳನ್ನು ಸ್ವಸ್ತಿಶ್ರೀ ಕಾಲೇಜುವಿನ ಎಲ್ಲಾ ವಿದ್ಯಾಥಿಗಳಿಗೆ ಕಳೆದ ಶುಕ್ರವಾರ (ಜೂ.೧೨) ಶ್ರೀ ಮಠದಲ್ಲಿ ಮಧ್ಯಾಹ್ನ   ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜ್‌ನ ಅಧ್ಯಕ್ಷ ಶ್ರೀ  ದಿಗಂಬರ ಜೈನ ಮಠ, ಜೈನಕಾಶಿ ಮೂಡಬಿದಿರೆ ಮಹಾಕ್ಷೇತ್ರದ ಜೈನ ಮಹಾಸಂಸ್ಥಾನದ ಪೀಠಾಧ್ಯಕ್ಷ ಭಾರತ ಭೂಷಣ ಜಗದ್ಗುರು ಸ್ವಸ್ತಿಶ್ರೀ ಜಗದ್ಗುರು ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ಗೌರವ ಉಪಸ್ಥಿತಿಯಲ್ಲಿದ್ದು  ಆಶೀರ್ವಾದ  ನೀಡಿ ಶಿಕ್ಷಣದ ಮಹತ್ವ ಅರಿತು ಕಲಿತು ಉತ್ತಮ ವಿದ್ಯಾಥಿಗಳಾಗಿ ಎಂದು ಅನುಗ್ರಹಿಸಿ ಬರೆಯುವ ಪುಸ್ತಕಗಳನ್ನು ವಿತರಿಸಿದರು ಹಾಗೂ ಶಿಕ್ಷಣಪ್ರೇಮಿ, ಕೊಡುಗೈದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಕೆನರಾ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಶಂಭವ ಕುಮಾರ್ ಮೂಡುಬಿದಿರೆ ಇವರು ಅತಿಥಿಯಾಗಿದ್ದು  ವಿದ್ಯಾಥಿಗಳಿಗೆ ಪುಸ್ತಕಗಳನ್ನ ವಿತರಿಸಿ ಶುಭಾರೈಸಿದರು.ಕಾಲೇಜ್‌ನ ಪ್ರಾಂಶುಪಾಲೆ ಸೌಮ್ಯಶ್ರೀ, ಉಪನ್ಯಾಸಕರು ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.