
kallianpurdotcom: Mob 9741001849
( ವರದಿ : ಸ್ಟೀವನ್ ಕುಲಾಸೋ ಉದ್ಯಾವರ )
ಉದ್ಯಾವರ: ವಿದ್ಯಾರ್ಥಿ ಜೀವನದಲ್ಲಿ ಫಲಿತಾಂಶ ಮಾತ್ರ ಮುಖ್ಯವಲ್ಲ, ಬದಲಾಗಿ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಫಲಿತಾಂಶದ ಸಾಧನೆಗೆ ಸನ್ಮಾನ ಅಂತ್ಯವಲ್ಲ. ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ ಎಂದು ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳಾದ ವo. ಫಾ. ಅನಿಲ್ ಡಿಸೋಜಾ ತಿಳಿಸಿದರು.
ಅವರು ಕಥೋಲಿಕ್ ಸಭಾ ಉದ್ಯಾವರ ಘಟಕದ ನೇತೃತ್ವದಲ್ಲಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿಭಾಗದಲ್ಲಿ ವಿಶೇಷ ಸಾಧನೆ ಮಾಡಿದ 15 ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಮಾತನಾಡಿದರು.
ದೇವರು ನಮ್ಮ ಮೂಲಕ ಪವಾಡಗಳನ್ನು ಮಾಡುತ್ತಾರೆ. ನಿಮ್ಮ ಸಾಧನೆಯ ಹಿಂದೆ ಹಿರಿಯರ ಶ್ರಮ ವಿಶೇಷವಾಗಿದೆ. ನಿಮಗೆ ಸಿಕ್ಕ ಈ ಸನ್ಮಾನ ಕೇವಲ ನಿಮಗೆ ಮಾತ್ರವಲ್ಲ, ಪ್ರತಿಯೊಬ್ಬ ವಿದ್ಯಾರ್ಥಿಗೆ ಸಿಗುವಂತಾಗಬೇಕು. ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯಕ್ರಮವನ್ನು ಪ್ರತಿ ವರ್ಷ ಮಾಡುತ್ತಿರುವ ಇಂತಹ ಸಂಘಟನೆಗಳು, ಎಲ್ಲಾ ವಿದ್ಯಾರ್ಥಿಗಳಿಗೂ ಒಂದು ರೀತಿಯ ಪ್ರೇರಣೆ ಎಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ಸಹಾಯಕ ಧರ್ಮಗುರು ಫಾ. ಸಂತೋಷ್ ಅಲ್ಮೇಡಾ, ಪಾಲನ ಮಂಡಳಿಯ ಉಪಾಧ್ಯಕ್ಷ ಮೇಲ್ವಿನ್ ನೊರೋನ್ನ, ಕಾರ್ಯದರ್ಶಿ ವಿಲ್ಫ್ರೆಡ್ ಡಿಸೋಜಾ, ನಿಕಟ ಪೂರ್ವ ಅಧ್ಯಕ್ಷೆ ಐರಿನ್ ಪಿರೇರಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ, ಕಥೊಲಿಕ್ ಸಭಾ ಉದ್ಯಾವರ ಘಟಕದ ಅಧ್ಯಕ್ಷ ಸ್ಟೀವನ್ ಲೂಯಿಸ್ ಸ್ವಾಗತಿಸಿದರೆ, ಕಾರ್ಯದರ್ಶಿ ಉಷಾ ಲವೀನಾ ಲೋಬೊ ಧನ್ಯವಾದ ಸಮರ್ಪಿಸಿದರು. ಸಾಧಕರ ಹೆಸರನ್ನು ಆನಂದ್ ರಾಜ್ ಫೆರ್ನಾಂಡಿಸ್ ವಾಚಿಸಿದರೆ, ಅಸ್ಟಿನ್ ಕರ್ಡೋಜ ಕಾರ್ಯಕ್ರಮ ನಿರೂಪಿಸಿದರು.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.