
kallianpurdotcom: Mob 9741001849
ಕಲ್ಯಾಣಪುರ: ಇಲ್ಲಿನ ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯ ವಾರ್ಷಿಕೋತ್ಸವ ಸಮಾರಂಭವು ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ ಉಡುಪಿ ಎಂ.ಜಿ.ಎಂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರು ಹಾಗೂ ಯಕ್ಷಗಾನ ಕಲಾವಿದರಾಗಿರುವ ಶ್ರೀಯುತ ಪ್ರೋ. ಎಂ.ಎಲ್.ಸಾಮಗರವರು ಡಾ.ಟಿ.ಎಂ.ಎ.ಪೈರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ದೀಪವನ್ನು ಪ್ರಜ್ವಲಿಸು ವುದರೊಂದಿಗೆ ಸಂಸ್ಮರಣೆ ಕಾರ್ಯಕ್ರಮವನ್ನು ನೆರವೇರಿಸಿದರು. ವಿದ್ಯಾರ್ಥಿಗಳು ಇಂಗ್ಲಿಷ್ ಮಾದ್ಯಮದಲ್ಲಿ ಕಲಿತರೆ ಮಾತ್ರ ಸಾಧನೆಯನ್ನು ಮಾಡಬಹುದು ಎಂಬ ಕಿವಿಮಾತಿನ ಜೊತೆಗೆ ಡಾ.ಟಿ.ಎಂ.ಎ.ಪೈ ಅವರ ಸಂಸ್ಮರಣೆ ನುಡಿಗಳನ್ನು ನುಡಿದರು.
ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಶಾಲಾ ಹಳೆ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿರುವ ಶ್ರೀ ವೆಂಕಟರಮಣ ಪುರಾಣಿಕ್ರವರು ಉನ್ನತ ವ್ಯಾಸಂಗಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವು ಭದ್ರ ಬುನಾದಿ ಎಂಬ ಹಿತನುಡಿ ಗಳನ್ನು ನುಡಿದರು. ವೇದಿಕೆಯಲ್ಲಿ ಉಪಸ್ಥಿತರಿರುವ ಇನೋರ್ವ ಅತಿಥಿ ಮಣಿಪಾಲ ಕೆ.ಎಂ.ಸಿ ಸಂಸ್ಥೆಯ ಅಸೋಸಿಯೇಟ್ ಹಾಗೂ ಶಾಲಾ ಹಳೆ ವಿದ್ಯಾರ್ಥಿಯಾಗಿರುವ ಶ್ರೀ ಅಭೀಷೇಕ್ ಪ್ರಭುರವರು ತಮ್ಮ ಅನುಭವದ ನುಡಿಗಳನ್ನು ನುಡಿದು ಶುಭ ಹಾರೈಸಿದರು.
ವಿದ್ಯಾರ್ಥಿಗಳಿಗೆ ಕೊಗ್ಗ ಗಿರಿಜಾ ಪಡಿಯಾರ್ ನಾಯಕ್ ಟ್ರಸ್ಟ್ ಫಂಢ್ ವಿದ್ಯಾರ್ಥಿವೇತನ , ದತ್ತಿನಿಧಿ ಬಹುಮಾನಗಳನ್ನು ಅತಿಥಿಗಳಲೆಲ್ಲರೂ ವಿತರಿಸಿದರು. ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆಯನ್ನು ತೋರಿದ ಸಾಧಕ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಶಾಲಾ ಸಂಚಾಲಕರಾಗಿರುವ ಶ್ರೀಮತಿ ಸುಮನಾ ಎಸ್. ಪೈರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀಯುತ ಎಚ್.ಎನ್.ವೆಂಕಟೇಶ್ರವರು ಪ್ರಾಸ್ತಾವಿಕ ನುಡಿಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.
ಶಾಲಾ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿರುವ ಶ್ರೀ ರಮಾನಂದ ಸಂಘದ ವರದಿಯನ್ನು ವಾಚಿಸಿದರು. ಶಿಕ್ಷಕಿ ಶ್ರೀಮತಿ ದಿವ್ಯ ಲಕ್ಷ್ಮೀ ಕಾರ್ಯಕ್ರಮ ಸಂಯೋಜಿಸಿದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿರುವ ಶ್ರೀ ಉದಯ್ ಕುಮಾರ್ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ಜರುಗಿತು.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.