Skip to main content
www.kallianpur.com | Email : kallianpur7@gmail.com | Mob : 9741001849

*ರಸಾಯನಶಾಸ್ತ್ರವು ಶಿಕ್ಷಕರಿಗೆ ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ – ಶ್ರೀ ಮಾರುತಿ.*

By July 31, 2023Kannada News
kallianpurdotcom: 31/07/23

ಉಡುಪಿ : ರಸಾಯನ ಶಾಸ್ತ್ರವು ನಿರಂತರ ಅಧ್ಯಯನ ಮತ್ತು ಅಧ್ಯಾಪನಕ್ಕೆ ಪೂರಕವಾಗಿದ್ದು, ಬೋಧನಾ ಅಭ್ಯಾಸ ಮತ್ತು ಜ್ಞಾನವನ್ನು ಹೆಚ್ಚಿಸುತ್ತದೆ  ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶ್ರೀ ಮಾರುತಿ ತಿಳಿಸಿದರು.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನ ಕಾರ್ಕಳ. ಇದರ ಸಹಭಾಗಿತ್ವದ  ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಉಡುಪಿಯಲ್ಲಿ ರಸಾಯನಶಾಸ್ತ್ರದ ಒಂದು ದಿನದ ಶೈಕ್ಷಣಿಕ ಕಾರ್ಯಗಾರ ವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ ರವರು ಮಾತುಗಳನಾಡುತ್ತಾ ” ಉತ್ತಮ ಬೋಧನೆಯಲ್ಲಿ ಇಂತಹ ಕಾರ್ಯಗಾರವು ವಿಶೇಷ ಪಾತ್ರವನ್ನು ವಹಿಸುತ್ತದೆ, ವಿಷಯದ ಕುರಿತು ಆಳವಾದ ಅರಿವನ್ನು ತಿಳಿಯಲು ಇಂತಹ ಕಾರ್ಯಗಾರ ಸಹಕಾರಿಯಾಗುತ್ತದೆ  ಎಂದು ತಿಳಿಸಿದರು. ಸಂಸ್ಥೆಯ ಸಂಸ್ಥಾಪಕರುಗಳಲ್ಲಿ ಓರ್ವರಾದ  ಶ್ರೀ ಆದರ್ಶ ಎಂ ಕೆ. ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಜಿಲ್ಲಾ ಪದವಿಪೂರ್ವ  ಕಾಲೇಜುಗಳ ರಸಾಯನಶಾಸ್ತ್ರ ಉಪನ್ಯಾಸಕರ ವೇದಿಕೆ ಅಧ್ಯಕ್ಷರಾದ ಶ್ರೀ ಪಿ ವಸಂತ್ ಆಚಾರ್ “ವಿನೂತನ, ಪ್ರಯೋಗಾತ್ಮಕ, ನಿರಂತರ ಬೋಧನೆಯು ವಿದ್ಯಾರ್ಥಿಗಳಲ್ಲಿ ಸೃಜನಾತ್ಮಕತೆಯನ್ನು ಸೃಷ್ಟಿಸುತ್ತದೆ ” ಎಂದು ಅಧ್ಯಕ್ಷೀಯ  ನುಡಿಗಳನ್ನಾಡಿದರು. ವೇದಿಕೆಯಲ್ಲಿ ಯು ಎಲ್ ಭಟ್, ಮಂಜುನಾಥ್ ಭಟ್  ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಹಿಂದಿ ಉಪನ್ಯಾಸಕರಾದ ಶ್ರೀ ಸುಧಾಕರ ಐಡಿಯವರು  ನಿರ್ವಹಿಸಿದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.