Skip to main content
www.kallianpur.com | Email : kallianpur7@gmail.com | Mob : 9741001849

ಧರ್ಮಸ್ಥಳದ ಮ್ಯೂಸಿಯಂಗೆ ಕ್ವಾಲಿಸ್ ಕಾರು ನೀಡಿದ ಸ್ವಸ್ತಿಶ್ರೀ ಚಾರುಕೀರ್ತಿ ಸ್ವಾಮೀಜಿ.

By May 16, 2024Mumbai News
kallianpurdotcom: 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ (ಆರ್‌ಬಿಐ), ಮೇ.೧೬: ಜೈನಕಾಶಿ ಮೂಡಬಿದಿರೆ ಮಹಾಕ್ಷೇತ್ರದ ಜೈನ ಮಹಾಸಂಸ್ಥಾನದ ಪೀಠಾಧ್ಯಕ್ಷ ಭಾರತ ಭೂಷಣ ಜಗದ್ಗುರು ಸ್ವಸ್ತಿಶ್ರೀ ಜಗದ್ಗುರು ಸ್ವಸ್ತಿಶ್ರೀ ಡಾ| ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾ ಸ್ವಾಮೀಜಿ ೨೦೦೩ರಲ್ಲಿ ತಾವು ಖರೀದಿಸಿದ ಟೊಯೋಟಾ ಕ್ವಾಲಿಸ್ ಕಾರು ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ಡಿ.ವೀರೇಂದ್ರ ಹೆಗ್ಗಡೆ ಅವರ ಮಂಜುಷಾ ಕಾರು ಮ್ಯೂಸಿಯಂಗೆ ಹಸ್ತಾಂತರಿಸಿದರು.

ಈ ಬಗ್ಗೆ ಕಳೆದ ಬುಧವಾರ ವೀರೇಂದ್ರ ಹೆಗ್ಗಡೆ ಅವರ ಸಮ್ಮುಖದಲ್ಲಿ ವಾಹನ ವರ್ಗಾವಣೆ ಸಹಿ ಹಾಕಿದರು. ಇದೇ ಸಂಧರ್ಭ ಚಾರಿತ್ರ ಚಕ್ರವರ್ತಿ ೧೦೮ ಶಾಂತಿ ಸಾಗರ ಆಚಾರ್ಯ ಪಾದರೋಹಣ ಶತಾಬ್ದಿ ಮಹೋತ್ಸವ ಶ್ರೀ ಜೈನ ಮಠದ ವತಿಯಿಂದ ವೇಣೂರು ಮಹಾ ಮಸ್ತಕಾಭಿಷೇಕ ಸಂಧರ್ಭ ನೆರವೇರಿಸಿದ ಸ್ಮರಣಾರ್ಥ ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಡಿ.ಹೆಗ್ಗಡೆ ದಂಪತಿಯನ್ನು ಸ್ವಾಮೀಜಿ ಅವರು ಗೌರವಿಸಿ ಹರಸಿ ಅಭಿನಂದನಾ ಪತ್ರ, ಶ್ರೀಫಲ ಮಂತ್ರಾಕ್ಷತೆ ನೀಡಿ ಹರಸಿ ಆಶೀರ್ವಾದಿಸಿದರು.

ವಾಹನ ವಸ್ತು ಸಂಗ್ರಹಾಲಯಕ್ಕೆ ಮೋಟಾರ್ ಕಾರು ಕೊಡುಗೆ ನೀಡಿದ ಸ್ವಾಮೀಜಿಗಳವರಿಗೆ ಹೆಗ್ಗಡೆ ಅವರು ಅಭಿನಂದನಾ ಪತ್ರ ನೀಡಿದರು. ಈ ಸಂದರ್ಭದಲ್ಲಿ ಶೈಲೇಂದ್ರ ಜೈನ್, ಪ್ರವೀಣ್ ಇಂದ್ರ ವೇಣೂರು, ಎಂ. ಬಾಹುಬಲಿ ಪ್ರಸಾದ್, ನಾಗವರ್ಮ ಆದಿತ್ಯ ಜೈನ್ ಉಪಸ್ಥಿತರಿದ್ದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.