(ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ (ಆರ್ಬಿಐ), ಜೂ.೦೩:ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೆ ಒಳಪಟ್ಟ ಪ್ರೌಢಶಾಲೆಗಳ ಹತ್ತನೆಯ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅದ್ಯಕ್ಷರಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಸ್ಮರಣಿಕೆ ನೀಡಿ ಅಭಿನಂದಿಸಿ ಮುಂದಿನಜೀವನಕ್ಕೆ ಶುಭ ಹಾರೈಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿಗಳಾದ ಶೋನ್ ಕೆ.ಎಸ್ ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ), ಉಜಿರೆ, ಕೆ.ಅಮೃತ, ತುಷಾರ ಬಿ.ಎಸ್, ಅವನೀಶ್ ಕೃಷ್ಣ, ನಿರೀಕ್ಷ ಯಲಿಗಾರ್ (ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆ, (ಸ್ಟೇಟ್) ಉಜಿರೆ, ಅಭಿಷೇಕ್, ರೋಹಿತ್ ಕಾಮತ್, ಅಜಯ್ ಭಾರದ್ವಾಜ್, ವೈಷ್ಣವಿ ಭಟ್ (ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿ), ಕೃತಿ ಬಿ.ಪಿ, ಸಾನ್ವಿ ಗೊಗಟೆ (ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ), ಮನೀಷ ಎಸ್ಡಿಎಂ ಅನುದಾನಿತ ಪ್ರೌಢ ಶಾಲೆ ಪೆರಿಂಜೆ, ನಿರೀಕ್ಷ ಎಸ್ಡಿಎಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆ, ಜೀವನ ಎಸ್ಡಿಎಂ ಅನುದಾನಿತ ಸೆಕೆಂಡರಿ ಶಾಲೆ ಬೆಳಾಲು, ಪೂಜ ಎಸ್ಡಿಎಂ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ, ಪವನ್ ಕೆ ಎಸ್ಡಿಎಂ ಪ್ರೌಢ ಶಾಲೆ ಕಾಂಚನ, ನಿಶಪ್ರೀಯ ಎಸ್ಡಿಎಂ ಮಂಗಳಜ್ಯೋತಿ ಸಮಗ್ರಶಾಲೆ ವಾಮಂಜೂರು ಹಾಜರಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ| ಸತೀಶ್ಚಂದ್ರ ಎಸ್. ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಅವರು ವಿದ್ಯಾರ್ಥಿಗಳು ಉತ್ತಮವಾದ ಗುರಿಗಳನ್ನಿಟ್ಟುಕೊಂಡು ಶೃದ್ಧೆ ಮತ್ತು ಏಕಾಗ್ರತೆಯಿಂದ ಅಭ್ಯಾಸ ಮಾಡುವಂತೆ ತಿಳಿಸಿ ಶುಭ ಹಾರೈಸಿದರು.
ವಿದ್ಯಾರ್ಥಿಗಳ ಜೊತೆ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ಧರು. ಬಿ.ಸೋಮಶೇಖರ ಶೆಟ್ಟಿ ಸಾಧಕ ವಿದ್ಯಾರ್ಥಿಗಳ ವಿವರ ನೀಡಿದರು. ಮನಮೋಹನ ನಾಯಕ ವಂದಿಸಿದರು.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.