
kallianpurdotcom: Mob 9741001849
ಕಲ್ಯಾಣಪುರ: ಇಲ್ಲಿನ ಡಾ.ಟಿ.ಎಂ.ಎ.ಪೈ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿರುವಂತಹ ಉಡುಪಿ ಡಯಟ್ ಸಂಸ್ಥೆಯ ಉಪನ್ಯಾಸಕರಾಗಿರುವ ಶ್ರೀಯುತ ಯೋಗನರಸಿಂಹ ಸ್ವಾಮಿಯವರು ವಿದ್ಯೆಯನ್ನು ಸೋಲಿಸುವ ಅಸ್ತ್ರ ಪ್ರಪಂಚದಲ್ಲಿ ಯಾವುದು ಇಲ್ಲ. ಹೆತ್ತವರಿಗೆ ಮತ್ತು ಗುರುಗಳಿಗೆ ಗೌರವವನ್ನು ನೀಡಬೇಕು ಅಭ್ಯಾಸ ಹವ್ಯಾಸವಾಗಿ ಮೂಡಿ ಬರಲಿ ಪ್ರಯತ್ನಕ್ಕೆ ಜಯ ಖಂಡಿತ ಹಾಗೂ ವಿದ್ಯಾರ್ಥಿಗಳ ಕಲಿಕೆಗೆ ಹೆತ್ತವರು ಪ್ರೋತ್ಸಾಹ ನೀಡುವಂತೆ ಹೆತ್ತವರಿಗೆ ಸಲಹೆ ನೀಡಿದರು.
ಶಾಲಾ ಮುಖ್ಯ ಶಿಕ್ಷಕರಾಗಿರುವ ಶ್ರೀ ಎಚ್.ಎನ್.ವೆಂಕಟೇಶ್ರವರು ಪ್ರಸ್ತಾವಿಕ ನುಡಿಯೊಂದಿಗೆ ಮುಖ್ಯ ಅತಿಥಿಗಳನ್ನು ಸ್ವಾಗತಿಸಿದರು. ಕಳೆದ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಗಳಿಸಿರುವಂತಹ ೧೦ ಮಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಕಳೆದ ಸಾಲಿನಲ್ಲಿ ಚಿತ್ರಕಲಾ ಹೈಯರ್ ಗ್ರೇಡ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ತೇರ್ಗಡೆ ಪ್ರಮಾಣ ಪತ್ರವನ್ನು ಮುಖ್ಯ ಅತಿಥಿಗಳು ವಿತರಿಸಿದರು.
ಶಿಕ್ಷಕಿ ಶ್ರೀಮತಿ ದಿವ್ಯಲಕ್ಷ್ಮೀ ಕಾರ್ಯಕ್ರಮ ಸಂಯೋಜಿಸಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಹೆತ್ತವರು ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.