Skip to main content
www.kallianpur.com | Email : kallianpur7@gmail.com | Mob : 9741001849

ಜೂ.೧೦: ಮಾಟುಂಗಾ ಪೂರ್ವದ ಮೈಸೂರು ಅಸೋಸಿಯೇಶನ್‌ನ ಸಭಾಗೃಹದಲ್ಲಿ ಸೃಜನಾ ಮುಂಬಯಿ ಕನ್ನಡ ಲೇಖಕಿಯರ ಬಳಗದ ವಿಚಾರಗೋಷ್ಠಿ.

By June 3, 2023Mumbai News
kallianpurdotcom : 03/06/2023
(ಚಿತ್ರ /ವರದಿ : ತಾರ ರೋನ್ಸ್ ಬಂಟ್ವಾಳ್)

ಮುಂಬಯಿ (ಆರ್‌ಬಿಐ), ಜೂ.೦೩: ಸೃಜನಾ ಮುಂಬಯಿ ಕನ್ನಡ ಲೇಖಕಿಯರ ಬಳಗವು ಇದೇ ಬರುವ ಜೂ.೧೦ರ ಶನಿವಾರ ಸಂಜೆ ೪.೦೦ ಗಂಟೆಗೆ ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯಲ್ಲಿನ ಮೈಸೂರು ಅಸೋಸಿಯೇಶನ್ ಮುಂಬಯಿ ಇದರ ಮೊದಲ ಮಹಡಿಯ ಕಿರು ಸಭಾಗೃಹದಲ್ಲಿ ವಿಚಾರಗೋಷ್ಠಿಯನ್ನು ಆಯೋಜಿಸಿದೆ.

ಬಹುಭಾಷಾ ಪಂಡಿತ ನಾಗರಹಳ್ಳಿ ಶ್ರೀನಿವಾಸಾಚಾರ್ಯ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಕಥಾ ಸಾಹಿತ್ಯದಲ್ಲಿ ಮಹಿಳಾ ಚಿತ್ರಣ ಎಂಬ ವಿಚಾರಗೋಷ್ಠಿಯ ವಿಷಯ ಮಂಡನೆಗೆ ಇಂಗ್ಲಿಷ್ ಕಥೆಗಳ ಬಗ್ಗೆ ಸಾಹಿತಿ, ಪ್ರಸಿದ್ಧ ಅನುವಾದಕಿ, ಶ್ಯಾಮಲಾ ಮಾಧವ ತಮ್ಮ ಅನುಭವದ ಸಾರವನ್ನು ಹಂಚಿ ಕೊಳ್ಳಲಿದ್ದಾರೆ. ಕನ್ನಡ ಕಥೆಗಳಲ್ಲಿನ ಒಳ ಹೊರನೋಟದ ಬಗ್ಗೆ ಕವಿ, ಸಾಹಿತಿ, ರಂಗನಿರ್ದೇಶಕ, ನಟ ಸಾ.ದಯಾ ಮಾತನಾಡಲಿದ್ದಾರೆ.

ಮರಾಠಿ ಕಥೆಗಳಲ್ಲಿನ ವಿಚಾರ ವಿಷಯಗಳನ್ನು ಕನ್ನಡ ಮರಾಠಿ ಸಾಹಿತಿ, ಖ್ಯಾತ ಅನುವಾದಕಿ ಅಕ್ಷತಾ ಪ್ರಸಾದ್ ದೇಶಪಾಂಡೆ ವಿಷಯ ಮಂಡಿಸಲಿದ್ದಾರೆ ಮಹಾನಗರದಲ್ಲಿನ ಸಾಹಿತ್ಯ ಹಾಗೂ ಕನ್ನಡಾಭಿಮಾನಿಗಳೆೆಲ್ಲರೂ ಆಗಮಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮುಂಬಯಿ ಕನ್ನಡ ಲೇಖಕಿಯರ ಬಳಗ ಸೃಜನಾ ಪ್ರಕಟಣೆಯಲ್ಲಿ ವಿನಂತಿಸಿಸ್ವಾಗತ ಕೋರಿದೆ.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.