Skip to main content
www.kallianpur.com | Email : kallianpur7@gmail.com | Mob : 9741001849

ಮಲಬಾರ್ ವಿಶ್ವರಂಗ ಪುರಸ್ಕಾರ-೨೦೨೪ ; ಕೆ.ವಿ.ಆರ್ ಐತಾಳ್ ಮುಂಬಯಿ ಸೇರಿ ಐವರು ಹಿರಿಯ ರಂಗಕರ್ಮಿಗಳ ಆಯ್ಕೆ.

By February 28, 2024Mumbai News
kallianpurdotcom: 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ (ಆರ್‌ಬಿಐ), ಫೆ.೨೮: ಸಂಸ್ಕ್ರತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ವಾರ್ಷಿಕವಾಗಿ ಕೊಡ ಮಾಡುತ್ತಿರುವ `ಮಲಬಾರ್ ವಿಶ್ವರಂಗ ಪುರಸ್ಕಾರ ೨೦೨೪’ ಫಲಿತಾಂಶ ಪ್ರಕಟಿಸಲಾಗಿದ್ದು ಈ ಬಾರಿಯೂ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗ ಕರ್ಮಿಗಳನ್ನು ಆಯ್ಕೆ ಮಾಡಲಾಗಿದೆ.

ಹೊರ ರಾಜ್ಯದಿಂದ ಮಹಾರಾಷ್ಟ್ರದ (ಮುಂಬಯಿ) ಹೆಸರಾಂತ ರಂಗ ನಿರ್ದೇಶಕ ಕೆ.ವಿ ರಾಘವೇಂದ್ರ ಐತಾಳ್, ಇವರು ಆಯ್ಕೆ ಯಾದರೆ ರಾಜ್ಯದಿಂದ ಆರ್.ಎಲ್ ಭಟ್ ಉಡುಪಿ (ನಾಟಕ ಸಾಹಿತ್ಯ), ಕಜೆ ರಾಮಚಂದ್ರ ಭಟ್ (ರಂಗ ಸಂಘಟಕರು), ಎಸ್.ವಿ ರಮೇಶ್ ಬೇಗಾರ್ (ರಂಗ ಸಂಘಟಕರು ಹಾಗೂ ನಿರ್ದೇಶಕರು), ಸುಜಾತ ಶೆಟ್ಟಿ (ರಂಗ ನಟಿ) ಇವರು ವಿಶ್ವರಂಗ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಇದೇ ಮಾರ್ಚ್ ೨೬ರ ಮಂಗಳವಾರ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವ ರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು ಆಯ್ದ ರಂಗಕರ್ಮಿ ಗಳಿಗೆ ಪ್ರಶಸ್ತಿಪತ್ರ, ಫಲಕ ಹಾಗೂ ಬೆಳ್ಳಿ ಪದಕದೊಂದಿಗೆ ಉಪಸ್ಥಿತ ಗಣ್ಯರು ವಾರ್ಷಿಕ `ಮಲಬಾರ್ ವಿಶ್ವರಂಗ ಪುರಸ್ಕಾರ ಪ್ರದಾನಿಸಲಿದ್ದಾರೆ ಎಂದು ಸಂಸ್ಕ್ರತಿ ವಿಶ್ವ ಪ್ರತಿಷ್ಠಾನದ ಸಂಘಟಕರು ತಿಳಿಸಿದ್ದಾರೆ.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.