Skip to main content

ಡಾ| ಕಾರ್ನಾಡ್‌ರನ್ನು ಅಭಿನಂದಿಸಿದ ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ರಾತ್ರಿಶಾಲಾ ವಿದ್ಯಾರ್ಥಿಗೆ ರಾಷ್ಟ್ರ ಮಟ್ಟದ ಪ್ರಶಸ್ತಿ ನಮ್ಮ ಹಿರಿಮೆ: ಸುರೇಂದ್ರ ಎ.ಪೂಜಾರಿ.

By December 23, 2025Mumbai News
kallianpurdotcom: Mob 9741001849
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್

ಮುಂಬಯಿ (ಆರ್‌ಬಿಐ), ಡಿ.೨೨: ಮದರ್ ಇಂಡಿಯಾ ಧರ್ಮಾರ್ಥ ರಾತ್ರಿ ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದು, ಇತ್ತೀಚೆಗಷ್ಟೇ ಪ್ರತಿಷ್ಠಿತ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸಾಹಿತ್ಯ ಪ್ರಶಸ್ತಿ ೨೦೨೫ ಪುರಸ್ಕ್ರತರಾದ ಪ್ರಸಿದ್ಧ ಸಾಹಿತಿ, ಸಂಶೋಧಕ ಡಾ| ವಿಶ್ವನಾಥ್ ಕಾರ್ನಾಡ್ ಅವರನ್ನು ಮದರ್ ಇಂಡಿಯಾ ಎಕ್ಸ್ ಸ್ಟೂಡೆಂಟ್ಸ್ ಫೌಂಡೇಶನ್ ವತಿಯಿಂದ ಕಾರ್ನಾಡ್ ಅವರ ನಿವಾಸದಲ್ಲಿ ಇಂದಿಲ್ಲಿ ಅಭಿನಂದಿಸಲಾಯಿತು.

ಫೌಂಡೇಶನ್‌ನ ಅಧ್ಯಕ್ಷ ಸುರೇಂದ್ರ ಎ.ಪೂಜಾರಿ, ಪ್ರಧಾನ ಕಾರ್ಯದರ್ಶಿ ಹರೀಶ್ ಮೈಂದನ್, ಉಪಾಧ್ಯಕ್ಷ ಉಮೇಶ್ ಶೆಟ್ಟಿ, ಕೋಶಾಧಿಕಾರಿ ಟಿ.ವಿ ಪೂಜಾರಿ, ಜತೆ ಕಾರ್ಯದರ್ಶಿ ಅಶೋಕ್ ಸುವರ್ಣ, ನಿಧಿ ಸಂಗ್ರಹ ಸಮಿತಿಯ ಕಾರ್ಯಧ್ಯಕ್ಷ ಮುಂಜುನಾಥ್ ಪೂಜಾರಿ ಉಪಸ್ಥಿತರಿದ್ದು ಅಭಿನಂದಿಸಿ ಶುಭಾರೈಸಿದರು.

ಸುರೇಂದ್ರ ಎ.ಪೂಜಾರಿ ಮಾತನಾಡಿ ಮುಂಬಾಯಿಯ ರಾತ್ರಿ ಶಾಲೆಯ ಹಳೆ ವಿದ್ಯಾರ್ಥಿಯೋರ್ವರಿಗೆ ಇಂತಹ ರಾಷ್ಟ್ರ ಮಟ್ಟದ ಪ್ರತಿಷ್ಠಿತ ಪ್ರಶಸ್ತಿ ದೊರಕಿರುವುದು ರಾತ್ರಿ ಶಾಲೆಗಳ ಹಳೆ ವಿದ್ಯಾರ್ಥಿಗಳಿಗೆ ಅಭಿಮಾನದ ಸಂಗತಿಯಾಗಿದೆ ಡಾ| ಕಾರ್ನಾಡ್ ಅವರ ಸಾಧನೆ ರಾತ್ರಿ ಶಾಲೆಯ ಇತಿಹಾಸದಲ್ಲಿ ಮಹತ್ತರವಾದುದು ಎಂದು ಪ್ರಶಂಸೆ ವ್ಯಕ್ತಪಡಿಸಿ ಫೌಂಡೇಶನ್ ಪರವಾಗಿ ಅಭಿನಂದನೆ ಸಲ್ಲಿಸಿದರು.

ಡಾ| ಕಾರ್ನಾಡ್ ಅವರು ಈ ಪ್ರಶಸ್ತಿಯನ್ನು ತನ್ನ ಬದುಕಿಗೆ ದಾರಿ ಮಾಡಿಸಿದ ಮದರ್ ಇಂಡಿಯಕ್ಕೆ ಅರ್ಪಿಸುತ್ತೇನೆ ಎಂದರು. ಕಥೆಗಾರರಾಗಿ, ಕವಿಯಾಗಿ, ನಾಟಕ ಕಲಾವಿದರಾಗಿ, ಹಿಂದಿ, ಕನ್ನಡ, ಇಂಗ್ಲೀಷ್ ಭಾಷೆಗಳ ಉಪನ್ಯಾಸಕರಾಗಿ, ಫುಟ್ಬಾಲ್ ಕ್ರೀಡಾಪಟುವಾಗಿ, ವಕೀಲರಾಗಿ, ಸಂಪಾದಕರಾಗಿ, ಬ್ಯಾಂಕರ್, ಉತ್ತಮ ವಾಗ್ಮಿ, ಸಂಶೋಧನ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರು, ಹಿಂದಿ ಭಾಷಾ ಪ್ರಚಾರಕರಾಗಿ ಬಹುಮುಖ ವ್ಯಕ್ತಿತ್ವದ ಡಾ| ಕಾರ್ನಾಡ್ ೩೦ಕ್ಕಿಂತಲೂ ಹೆಚ್ಚು ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ ಮದರ್ ಇಂಡಿಯಾದ ಹೆಮ್ಮೆಯ ಹಳೆ ವಿದ್ಯಾಥಿüð ಎಂದು ಅಶೋಕ್ ಸುವರ್ಣ ಪರಿಚಯಿಸಿ ವಂದಿಸಿದರು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.