
kallianpurdotcom: 19/09/23
(ಚಿತ್ರ /ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, (ಆರ್ಬಿಐ), ಉಜಿರೆ: ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ೫೨ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು. ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.
ಭಾನುವಾರ ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.೬೩ ದಿನಗಳಲ್ಲಿ ನಡೆದ ಪುರಾಣ ವಾಚನ- ಪ್ರವಚನದಲ್ಲಿ ಭಾಗವಹಿಸಿದ ೧೩ ವಾಚನಕಾರರು ಮತ್ತು ೧೮ ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು. ಹೇಮಾವತಿ ವೀ.ಹೆಗ್ಗಡೆಯವರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಕೊನೆಯಲ್ಲಿ ಧನ್ಯವಾದವಿತ್ತರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಪಾರುಪತ್ಯಗಾರ್ ಲಕ್ಷಿ÷್ಮನಾರಾಯಣ ರಾವ್ ಮತ್ತು ಸಂತೋಷ್ ಗೌಡ ಸಮಾರಂಭದ ಆಯೋಜನೆಯಲ್ಲಿ ಸಹಕರಿಸಿದರು.
Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.
Hence, sending offensive comments using Kallianpur.com will be purely at your own risk, and in no way will kallianpur.com be held responsible.