Skip to main content
www.kallianpur.com | Email : kallianpur7@gmail.com | Mob : 9741001849

ತುಳು ಸಂಘ ಬರೋಡ ಸಂಭ್ರಮಿಸಿದ ೭೭ನೇ ಸ್ವಾತಂತ್ರ್ಯೊತ್ಸವ.

By August 16, 2023Mumbai News
kallianpurdotcom: 16/08/23
(ಚಿತ್ರ / ವರದಿ : ರೊನಿಡಾ ಮುಂಬಯಿ)

ಮುಂಬಯಿ, ಆ.೧೫ : ತುಳು ಸಂಘ (ರಿ.) ಬರೋಡ ಸಂಸ್ಥೆಯು ಕಳೆದ ಮಂಗಳವಾರ ಗುಜರಾತ್ ರಾಜ್ಯದ ಬರೋಡ ಇಲ್ಲಿನ ತುಳು ಚಾವಡಿ ಸಭಾಗೃಹದಲ್ಲಿ ಮಕ್ಕಳಿಂದ, ಮಕ್ಕಳಿಗಾಗಿ, ಮಕ್ಕಳು ನಿರೂಪಿಸಿದ ಕಾರ್ಯಕ್ರಮವಾಗಿಸಿ ರಾಷ್ಟ್ರಹಬ್ಬ ಸ್ವಾತಂತ್ರ್ಯೊತ್ಸವವನ್ನು ಸಂಭ್ರಮೋಲ್ಲಾಸದಿಂದ ಆಚರಿಸಿದರು.

ಭಾರತದ ಭವಿಷ್ಯತ್ತಿನ ಪ್ರಜೆಗಳಾದ ಮಕ್ಕಳೇ ಮಕ್ಕಳಿಗಾಗಿ ಸಂಭ್ರಮಿಸಿದ ವೈಶಿಷ್ಟಮಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಸಂಘ ಬರೋಡ ಇದರ ಮಕ್ಕಳ ವಿಭಾಗದ ಕಾರ್ಯಧ್ಯಕ್ಷೆ ಕು| ವೈಷ್ಣವಿ ಶೆಟ್ಟಿ ವಹಿಸಿದ್ದು, ಪಾರುಲ್ ಕಾಲೇಜ್‌ನ ವಿದ್ಯಾರ್ಥಿನಿ ವಂದನಾ ನಾರಾಯಣ ಮುಖ್ಯ ಅತಿಥಿಯಾಗಿದ್ದು ದೀಪ ಪ್ರಜ್ವಲಿಸಿ ಸಂಭ್ರಮಕ್ಕೆ ಚಾಲನೆ ನೀಡಿ ರಾಷ್ಟ್ರೀಯ ಭಾವೈಕ್ಯತೆಯಲ್ಲಿ ಮಕ್ಕಳು ತೊಡಗಿಸಿಕೊಳ್ಳುವಂತೆ ತಿಳಿಸಿ ಶುಭಾರೈಸಿದರು.

ಕಾರ್ಯಕ್ರಮದಲ್ಲಿ ತುಳು ಸಂಘ ಬರೋಡ ಇದರ ಗೌರವಾಧ್ಯಕ್ಷ ದಯಾನಂದ ಬೋಂಟ್ರಾ, ಅಧ್ಯಕ್ಷ ಶಶಿಧರ ಬಿ.ಶೆಟ್ಟಿ, ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಕೋಶಾಧಿಕಾರಿ ಬಾಲಚಂದ್ರ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಕ್ಕಳ ವಿಭಾಗದ ಉಪಾಧ್ಯಕ್ಷೆ ಕು| ರಕ್ಷಿಕಾ, ಮಾಧವ ಶೆಟ್ಟಿ, ಸತೀಶ್ ಶೆಟ್ಟಿ, ಮಹಾವೀರ್ ಜೈನ್, ದಿನಾಕರ್ ಶೆಟ್ಟಿ ಹಾಜರಿದ್ದು ಡಾ| ಶರ್ಮಿಳಾ ಜೈನ್ ಮತ್ತು ಮಂಜುಳಾ ಗೌಡ ಅವರ ಸಂಯೋಜನೆಯಲ್ಲಿ ಕಾರ್ಯಕ್ರಮದ ನಡೆಸಲ್ಪಟ್ಟಿತು.

ವೈಷ್ಣವಿ ಶೆಟ್ಟಿ ಸ್ವಾಗತಿಸಿದರು. ಮಾ| ಕುಶಲ್ ಗೌಡ ಮತ್ತು ಕು| ಪ್ರಾಪ್ತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕು| ಮಿಥಾಲಿ ಗೌಡ ವಂದಿಸಿದರು. ಸಂಘದ ಮಹಿಳೆಯರು ಮತ್ತು ಮಕ್ಕಳು ರಾಷ್ಟ್ರಪ್ರೇಮ ಸಾರುವ ವೈಶಿಷ್ಟ ಮಯ ಸಾಂಸ್ಕ್ರತಿಕ ಕಾರ್ಯಕ್ರಮ ಪ್ರಸ್ತುತ ಪಡಿಸಿದರು.

ಆ ಮೊದಲು ತುಳು ಸಂಘ ಬರೋಡ ಇದರ ಅಧ್ಯಕ್ಷ ಶಶಿಧರ ಬಿ.ಶೆಟ್ಟಿ ಅಧ್ಯಕ್ಷತೆಯಲ್ಲಿ ಸಂಘದ ವಾರ್ಷಿಕ ಮಹಾಸಭೆ ನಡೆಸಲ್ಪಟ್ಡಿತು.

Leave a Reply

Disclaimer: Please write your correct name and email address. Kindly do not post any personal, abusive, defamatory, infringing, obscene, indecent, discriminatory or unlawful or similar comments. www.kallianpur.com will not be responsible for any defamatory message posted under this article.

Hence, sending offensive comments using Kallianpur.com will be purely at your own risk, and in no way will kallianpur.com be held responsible.